ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಬಗ್ಗೆ ವಿಡಿಯೋ: ಯೂಟ್ಯೂಬರ್ ಸಮೀರ್​ಗೆ ಜಾರಿಯಾಗಿದ್ದ ನೋಟಿಸ್​ಗೆ ತಡೆ – HIGH COURT

 

ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಬಗ್ಗೆ ವಿಡಿಯೋ: ಯೂಟ್ಯೂಬರ್ ಸಮೀರ್​ಗೆ ಜಾರಿಯಾಗಿದ್ದ ನೋಟಿಸ್​ಗೆ ತಡೆ – HIGH COURT

soujanya case news


ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದ ಕುರಿತಂತೆ ಯೂಟ್ಯೂಬ್​​ನಲ್ಲಿ ವಿಡಿಯೋ ಪೋಸ್ಟ್​ ಮಾಡಿರುವ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್​ಗೆ​ ಪೊಲೀಸರು ಜಾರಿ ಮಾಡಿದ್ದ ನೋಟಿಸ್​ಗೆ ಹೈಕೋರ್ಟ್​ನಿಂದ ತಡೆ ಬಿದ್ದಿದೆ.

photo credits : Google 

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಯೂಟ್ಯೂಬ್​​ನಲ್ಲಿ ವಿಡಿಯೋ ಪೋಸ್ಟ್​ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್​ ಸಮೀರ್ ಎಂ.ಡಿ.​ ಎಂಬವರಿಗೆ ಪೊಲೀಸರು ಜಾರಿ ಮಾಡಿದ್ದ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ.

ಎಫ್​ಐಆರ್​ ನೀಡದೆಯೂ ವಿಚಾರಣೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್​ ಪ್ರಶ್ನಿಸಿ ಸಮೀರ್​ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ, ಇಡೀ ವಿಡಿಯೋದಲ್ಲಿ ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ಮಾತುಗಳನ್ನು ಆಡಿಲ್ಲ. ಆದರೂ, ಎಫ್​ಐಆರ್​ ಪ್ರತಿ ಇಲ್ಲದೇ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು.

ಇದನ್ನೂ ಓದಿ: ಸ್ಯಾನ್ವಿ ಸುದೀಪ್ ಅವರ ಬಾಯ್ಫ್ರೆಂಡ್ ಯಾರು ಎಂದು ತಿಳಿಯಲು ಇಚ್ಛಿಸುತ್ತೀರಾ? Read this article, 

ಈ ವೇಳೆ ಪೀಠ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜೊತೆಗೆ ಎಫ್​ಐಆರ್​ ಇರಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಈ ಅಲ್ಲದೇ, ದೂರು ಯಾರು ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಆದರೂ ನೋಟಿಸ್​ ನೀಡುವುದಕ್ಕೆ ಹೇಗೆ ಸಾಧ್ಯ ಎಂದು ಪೀಠ ಪ್ರಶ್ನಿಸಿತು.

ಇದಕ್ಕೆ ಸರ್ಕಾರದ ಪರ ವಕೀಲರು,” ಅರ್ಜಿದಾರರನ್ನು ಬಂಧಿಸಿಲ್ಲ” ಎಂದು ತಿಳಿಸಿದರು. ಇದಕ್ಕೆ ಪೀಠ, ”ನೋಟಿಸ್​ ಜಾರಿ ಮಾಡಿದ್ದು, ಹಾಜರಾಗದಿದ್ದರೆ ಮುಂದಿನ ನಡೆಯೇ ಬಂಧನ ಆಗುತ್ತಿತ್ತು. ನಿಯಮಗಳ ಪ್ರಕಾರ ನೋಟಿಸ್​ ಜಾರಿ ಮಾಡದಿದ್ದಲ್ಲಿ ಹಾಜರಾಗಲು ಅವಕಾಶ ನೀಡಲಾಗುವುದಿಲ್ಲ” ಎಂದು ಹೇಳಿತು.

ಪ್ರಕರಣದ ವಿವರ: ಅರ್ಜಿದಾರ ಸಮೀರ್ ಎಂ.ಡಿ. ಅವರು ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಹಾಗೂ ಅತ್ಯಾಚಾರ ಪ್ರಕರಣದ ಕುರಿತು ವಿಡಿಯೋ ಪೋಸ್ಟ್​​ ಮಾಡಿದ್ದರು. ಈ ಸಂಬಂಧ ಬಳ್ಳಾರಿ ಜಿಲ್ಲೆಯ ಕೌಲ್‌ಬಜಾರ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಈ ಸಂಬಂಧ ಧಾರ್ಮಿಕ ಭಾವನೆ ಹೊಂದಿರುವ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿ ವಿಡಿಯೋ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ಬುಧವಾರ ಸಮೀರ್​ ಕಚೇರಿಗೆ ಭೇಟಿ ನೀಡಿದ್ದ ಪೊಲೀಸರು ಗುರುವಾರ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದ್ದರು. ಇದನ್ನು ಪ್ರಶ್ನಿಸಿ ಸಮೀರ್​ ಹೈಕೋರ್ಟ್ ಮೆಟ್ಟಿಲೇರಿದ್ದರು.

Leave a Reply

Your email address will not be published. Required fields are marked *