ಪ್ರತಿನಿತ್ಯ ಮಾಡುವಂತಹ ಸಣ್ಣ ತಪ್ಪುಗಳಿಂದ ನಿಮ್ಮ ಕಿಡ್ನಿಗಳಿಗೆ ಆಗುತ್ತೆ ಹಾನಿ: ತಜ್ಞರ ಸಲಹೆ ಹೀಗಿದೆ ನೋಡಿ – KIDNEY DAMAGE REASONS

 

ಪ್ರತಿನಿತ್ಯ ಮಾಡುವಂತಹ ಸಣ್ಣ ತಪ್ಪುಗಳಿಂದ ನಿಮ್ಮ ಕಿಡ್ನಿಗಳಿಗೆ ಆಗುತ್ತೆ ಹಾನಿ: ತಜ್ಞರ ಸಲಹೆ ಹೀಗಿದೆ ನೋಡಿ – KIDNEY DAMAGE REASONS

google images

Kidney Damage Reasons: ಪ್ರತಿದಿನ ಮಾಡುವಂತಹ ಸಣ್ಣ ತಪ್ಪುಗಳಿಂದ ನಿಮ್ಮ ಕಿಡ್ನಿಗೆ ಹಾನಿಯಾಗುತ್ತದೆ. ಈ ರೋಗಲಕ್ಷಣಗಳನ್ನು ಗುರುತಿಸಿ ಜಾಗರೂಕರಾಗಿರಲು ವೈದ್ಯರು ಸಲಹೆ ನೀಡುತ್ತಾರೆ.


Kidney Damage Reasons: ಮಾನವ ದೇಹದಲ್ಲಿ ಮೂತ್ರಪಿಂಡಗಳ ಪ್ರಮುಖವಾದ ಪಾತ್ರವಹಿಸುತ್ತವೆ. ಇವು ದೇಹದಿಂದ ತ್ಯಾಜ್ಯ ಹಾಗೂ ಕಲ್ಮಶಗಳನ್ನು ತೆಗೆದುಹಾಕಿ ನಮ್ಮನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತವೆ. ಇವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಾದರೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಹಾಗೂ ಅನೇಕ ದೀರ್ಘಕಾಲೀನ ಸಮಸ್ಯೆಗಳನ್ನು ತಡೆಯುವುದು ಮುಖ್ಯವಾಗಿದೆ ಎಂದು ತಜ್ಞರು ತಿಳಿಸುತ್ತಾರೆ.

ಮೂತ್ರಪಿಂಡದ ಅಸಮರ್ಪಕ ಕಾರ್ಯವು ಮಧುಮೇಹ ಹಾಗೂ ಹೃದ್ರೋಗದ ಅಪಾಯವನ್ನೂ ಹೆಚ್ಚಿಸುತ್ತದೆ ಎಂದು ಎಚ್ಚರಿಕೆ ನೀಡುತ್ತಾರೆ. ಆದರೆ, ನಾವು ಅರಿವಿಲ್ಲದೆ ಪ್ರತಿದಿನ ಮಾಡುವ ತಪ್ಪುಗಳು ಮೂತ್ರಪಿಂಡ ಹಾನಿಗೂ ಕಾರಣವಾಗುತ್ತದೆ. ಈ ತಪ್ಪುಗಳು ಯಾವುವು ಎಂಬುದನ್ನು ನಾವು ಇದೀಗ ತಿಳಿದುಕೊಳ್ಳೋಣ. 

ಕಡಿಮೆ ನೀರು ಕುಡಿಯುವುದು: ನಿಮ್ಮ ಮೂತ್ರಪಿಂಡಗಳನ್ನು ಆರೋಗ್ಯವಾಗಿಡಲು ನೀವು ಯಾವಾಗಲೂ ಹೈಡ್ರೇಟೆಡ್ ಆಗಿರಬೇಕು ಎಂದು ತಜ್ಞರು ತಿಳಿಸುತ್ತಾರೆ. ಸಾಕಷ್ಟು ನೀರು ಕುಡಿಯದಿದ್ದರೆ ಮೂತ್ರಪಿಂಡಗಳ ಕಾರ್ಯನಿರ್ವಹಣೆ ನಿಧಾನವಾಗುತ್ತದೆ. ರಕ್ತದಿಂದ ತ್ಯಾಜ್ಯವನ್ನು ಫಿಲ್ಟರ್ ಮಾಡಿ ಮೂತ್ರದ ಮೂಲಕ ಹೊರಹಾಕಲು ಸಾಧ್ಯವಿಲ್ಲ. ಪರಿಣಾಮವಾಗಿ ಮೂತ್ರಪಿಂಡದ ಕಲ್ಲುಗಳು ರೂಪುಗೊಳ್ಳಬಹುದು ಎಂದು ತಜ್ಞರು ಎಚ್ಚರಿಕೆ ನೀಡುತ್ತಾರೆ.

ಧೂಮಪಾನ: ಧೂಮಪಾನವು ಮೂತ್ರಪಿಂಡಗಳಿಗೆ ಹಾನಿ ಮಾಡುವ ತಪ್ಪುಗಳಲ್ಲಿ ಒಂದಾಗಿದೆ. ಇದು ಶ್ವಾಸಕೋಶದ ಕಾರ್ಯನಿರ್ವಹಣೆಯ ಜೊತೆಗೆ ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರುತ್ತದೆ. ಧೂಮಪಾನವು ಮೂತ್ರಪಿಂಡಗಳಿಗೆ ರಕ್ತ ಪೂರೈಕೆಯನ್ನು ಕಡಿಮೆ ಮಾಡುತ್ತದೆ. ಇದರ ಪರಿಣಾಮವಾಗಿ ಅವು ತ್ಯಾಜ್ಯವನ್ನು ಸರಿಯಾಗಿ ಶೋಧಿ ಹೊರಹಾಕುವುದಿಲ್ಲ. ಇದು ಅಧಿಕ ರಕ್ತದೊತ್ತಡ ಹಾಗೂ ಮೂತ್ರಪಿಂಡದ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡುತ್ತಾರೆ.

ಅತಿಯಾದ ಉಪ್ಪು ಸೇವಿಸುವುದು: ಉಪ್ಪಿನಲ್ಲಿ ಹೆಚ್ಚಿನ ಅಯೋಡಿನ್ ಅಂಶವಿರುವುದರಿಂದ ಅಧಿಕ ರಕ್ತದೊತ್ತಡ ಉಂಟಾಗಿ ಮೂತ್ರಪಿಂಡಗಳಿಗೆ ಹಾನಿಯಾಗುತ್ತದೆ. ಹೆಚ್ಚು ಉಪ್ಪು ಸೇವಿಸುವುದರಿಂದ ತ್ಯಾಜ್ಯವನ್ನು ಹೊರಹಾಕುವ ಪ್ರಕ್ರಿಯೆಯು ಕಷ್ಟಕರವಾಗಬಹುದು. ಅದಕ್ಕಾಗಿಯೇ ಅತಿಯಾಗಿ ಉಪ್ಪು ಸೇವನೆಯನ್ನು ಕಡಿಮೆ ಮಾಡುವುದರಿಂದ ಮೂತ್ರಪಿಂಡದ ಆರೋಗ್ಯ ರಕ್ಷಿಸಬಹುದು ಎಂದು ತಜ್ಞರು ಹೇಳುತ್ತಾರೆ.

ಅತಿಯಾದ ಸಕ್ಕರೆ ಸೇವನೆ: ಅತಿಯಾದ ಸಕ್ಕರೆ ಸೇವನೆಯು ಮಧುಮೇಹ ಮತ್ತು ಬೊಜ್ಜುತನಕ್ಕೆ ಕಾರಣವಾಗುತ್ತದೆ. ಅಧಿಕ ರಕ್ತದ ಸಕ್ಕರೆ ಮಟ್ಟವು ಮೂತ್ರಪಿಂಡಗಳಿಗೆ ರಕ್ತ ಪೂರೈಸುವ ನಾಳಗಳನ್ನು ಹಾನಿಗೊಳಿಸುತ್ತದೆ. ಇದರ ಪರಿಣಾಮವಾಗಿ ಮೂತ್ರಪಿಂಡದ ಕಾರ್ಯವು ನಿಧಾನಗೊಳ್ಳುತ್ತದೆ. ಅದಕ್ಕಾಗಿಯೇ ಸಕ್ಕರೆ ಸೇವನೆಯನ್ನು ಕಡಿಮೆ ಮಾಡಲು ಹಾಗೂ ಮೂತ್ರಪಿಂಡಗಳನ್ನು ರಕ್ಷಿಸಲು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಾರೆ.

ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಜೀವನಶೈಲಿಯಲ್ಲಿ ಬದಲಾವಣೆಗಳು ವಿಶೇಷವಾಗಿ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಮೂತ್ರಪಿಂಡಗಳಿಗೆ ಹಾನಿ ಮಾಡುತ್ತದೆ. ಆಗಾಗ್ಗೆ ಮೂತ್ರ ವಿಸರ್ಜನೆ, ಆಯಾಸ ಮತ್ತು ತುರಿಕೆ ಮುಂತಾದ ಲಕ್ಷಣಗಳನ್ನು ಅನುಭವಿಸಿದರೆ ಜನರು ಜಾಗರೂಕರಾಗಿರಬೇಕು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅನೇಕ ಜನರು ಈ ಆರಂಭಿಕ ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ಕೊನೆಯಲ್ಲಿ ತೀವ್ರ ಸಮಸ್ಯೆಯಿಂದ ಬಳಲುತ್ತಾರೆ. ಅದಕ್ಕಾಗಿಯೇ ಅಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ಇದರ ಪರಿಣಾಮವಾಗಿ ಮೂತ್ರಪಿಂಡದ ಹಾನಿಯನ್ನು ತಡೆಗಟ್ಟಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯರು ಸೂಚನೆ ನೀಡುತ್ತಾರೆ.

ಓದುಗರಿಗೆ ಮುಖ್ಯ ಸೂಚನೆ: ಈ ವರದಿಯಲ್ಲಿ ನಿಮಗೆ ನೀಡಲಾದ ಎಲ್ಲ ಆರೋಗ್ಯ ಸಂಬಂಧಿತ ಮಾಹಿತಿ ಹಾಗೂ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರವೇ ನೀಡಲಾಗಿದೆ. ನಾವು ಈ ಮಾಹಿತಿಯನ್ನು ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯ ಆಧಾರದ ಮೇಲೆ ಒದಗಿಸುತ್ತಿದ್ದೇವೆ. ನೀವು ಈ ಬಗ್ಗೆ ವಿವರವಾಗಿ ತಿಳಿದುಕೊಳ್ಳಬೇಕು. ಮತ್ತು ಈ ವಿಧಾನ ಅಥವಾ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದಾದಲ್ಲಿ ನುರಿತ ಪರಿಣತ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.