18 ವರ್ಷದ ಖುಷಿ 18 ಗಂಟೆಯೂ ಉಳಿಯಲಿಲ್ಲ! ದುರಂತದಲ್ಲಿ ಅಂತ್ಯವಾಯ್ತು RCB ಸಂಭ್ರಮಾಚರಣೆ | Stampede at Bengaluru Chinnaswamy Stadium 11 dead RCB celebrations cancelled

18 ವರ್ಷದ ಖುಷಿ 18 ಗಂಟೆಯೂ ಉಳಿಯಲಿಲ್ಲ! ದುರಂತದಲ್ಲಿ ಅಂತ್ಯವಾಯ್ತು RCB ಸಂಭ್ರಮಾಚರಣೆ | Stampede at Bengaluru Chinnaswamy Stadium 11 dead RCB celebrations cancelled

Last Updated:

ಬೆಂಗಳೂರು ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಇದೀಗ ಸೂತಕದ ಪರಿಸ್ಥಿತಿ ನಿರ್ಮಾಣವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಬೆನ್ನಲ್ಲೇ ಆರ್‌ಸಿಬಿ ಸಂಭ್ರಮಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಆರ್‌ಸಿವಿ ಸಂಭ್ರಮಾಚರಣೆ ರದ್ದುಆರ್‌ಸಿವಿ ಸಂಭ್ರಮಾಚರಣೆ ರದ್ದು
ಆರ್‌ಸಿವಿ ಸಂಭ್ರಮಾಚರಣೆ ರದ್ದು

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋಬ್ಬರಿ 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದು ಕೋಟ್ಯಾಂತರ ಆರ್‌ಸಿಬಿ ಅಭಿಮಾನಿಗಳ ಕನಸು ಈಡೇರಿಸಿದೆ. ಸದ್ಯ ಈ ಖುಷಿಪಡೋ ಸಮಯದಲ್ಲೇ ದುರಂತ ಒಂದು ನಡೆದು ಹೋಗಿದೆ. ಆರ್‌ಸಿಬಿ ಆಟಗಾರರಿಗೆ ವಿಧಾನ ಸೌಧದಲ್ಲಿ ಸರ್ಕಾರದ ವತಿಯಿಂದ ಸನ್ಮಾನ ಆಯೋಜನೆ ಮಾಡಲಾಗಿತ್ತು. ಇದಾದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಟಗಾರರು ಅಭಿಮಾನಿಗಳ ಜೊತೆ ಸಂಭ್ರಮಾಚರಣೆ ಮಾಡಲಿದ್ದರು. ಆದ್ರೆ, ಈ ನಡುವೆ ಕಾಲ್ತುಳಿತಕ್ಕೆ ಬರೋಬ್ಬರಿ 10 ಮಂದಿ ಸಾವನ್ನಪ್ಪಿದ್ದಾರೆ. ಸತ್ಯ ಸಂಭ್ರಮದಲ್ಲಿದ್ದ ಬೆಂಗಳೂರಿನಲ್ಲಿ ಸೂತಕ ಛಾಯೆ ಆವರಿಸಿದೆ. ಈ ಬೆನ್ನಲ್ಲೇ ಇದೀಗ ಆರ್‌ಸಿಬಿ (RCB Victory Celebration Cancel) ಸಂಭ್ರಮಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರು ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಇದೀಗ ಸೂತಕದ ಪರಿಸ್ಥಿತಿ ನಿರ್ಮಾಣವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಬೆನ್ನಲ್ಲೇ ಆರ್‌ಸಿಬಿ ಸಂಭ್ರಮಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ದುರಂತದಿಂದಾಗಿ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಾರ್ಯಕ್ರಮ ಕೂಡಲೇ ನಿಲ್ಲಿಸುವಂತೆ ಮನವಿ ಮಾಡಿದೆ. ಅಲ್ಲದೇ ಇದೀಗ ಸಂಭ್ರಮಾಚರಣೆಯ ಕಾರ್ಯಕ್ರಮವನ್ನು ಮೊಟಕುಗೊಳಿಸಿದೆ.