ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹ ವೆಚ್ಚಕ್ಕೆ ಪ್ರತಿ ಜೋಡಿಗೆ ₹50 ಸಾವಿರ – MINORITY COMMUNITY ALLOCATION
ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹ ವೆಚ್ಚಕ್ಕೆ ಪ್ರತಿ ಜೋಡಿಗೆ ₹50 ಸಾವಿರ ನೀಡಲಾಗುವುದು ಎಂದು , ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ಪ್ರಕಡಿಸಿದರು.
ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಂತೆ 250 ಇಂಗ್ಲಿಷ್ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಉತ್ತಮಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಹೇಳಿದರು. ಇದಕ್ಕೆ ಸಾಕಷ್ಟು ಹಣ, ಸುಮಾರು 400 ಕೋಟಿ ರೂ. ಅಲ್ಪಸಂಖ್ಯಾತ ಸಮುದಾಯದಲ್ಲಿ ಮದುವೆಯಾಗುವ ಪ್ರತಿ ಜೋಡಿಯು ಅವರ ಮದುವೆಯ ವೆಚ್ಚಕ್ಕೆ ಸಹಾಯ ಮಾಡಲು 50,000 ರೂಪಾಯಿಗಳನ್ನು ಪಡೆಯುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಮಾಹಿತಿಯನ್ನು 2025-26 ರ ಬಜೆಟ್ನಲ್ಲಿ ಹಂಚಿಕೊಳ್ಳಲಾಗಿದೆ ಮತ್ತು ಇದು ಅಲ್ಪಸಂಖ್ಯಾತ ಗುಂಪುಗಳ ಜನರಿಗೆ ಸಹಾಯ ಮಾಡಲು ಉದ್ದೇಶಿಸಲಾಗಿದೆ.
Karntaka Budget 2025 – Key Points Here
- ಅಲ್ಪಸಂಖ್ಯಾತರ ಕಾಲೊನಿ ಅಭಿವೃದ್ಧಿ ಯೋಜನೆಗೆ 1,000 ಕೋಟಿ ರೂ ಕ್ರಿಯಾ ಯೋಜನೆ ತಯಾರಿಸಿದ್ದು, ಕಾಮಗಾರಿ 2025-26ರಿಂದಲೇ ಅನುಷ್ಠಾನ.
- ವಕ್ಫ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ಥಾನ ಮೂಲಸೌಕರ್ಯ ಹಾಗೂ ಆಸ್ತಿ ಸಂರಕ್ಷಣೆಗಾಗಿ 150 ಕೋಟಿ ರೂ.
- 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗ ಪ್ರಾರಂಭ.
- ಮದರಸಾಗಳಲ್ಲಿ ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಸೇರಿದಂತೆ ಅಗತ್ಯ ಸೌಲಭ್ಯ. ಎನ್ಐಒಎಸ್ ಮೂಲಕ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಸಿದ್ಧತೆ.
- ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಯುವಕ/ಯುವತಿಯರಿಗೆ ನವೋದ್ಯಮ ಪ್ರಾರಂಭಕ್ಕೆ ಉತ್ತೇಜನ.
- ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ ತರಬೇತಿ.
- ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ಪ್ರಾದೇಶಿಕ ಕೇಂದ್ರ.
- ವಕ್ಫ್ ಸಂಸ್ಥೆಗಳ ಖಾಲಿ ನಿವೇಶನದಲ್ಲಿ 15 ಮಹಿಳಾ ಕಾಲೇಜು ನಿರ್ಮಾಣಕ್ಕೆ ಕ್ರಮ, 2025-26ರಿಂದ 16 ಹೊಸ ಕಾಲೇಜುಗಳು ಸ್ಥಾಪನೆ.
- ಅಲ್ಪಸಂಖ್ಯಾತರ 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗಕ್ಕಾಗಿ 25,00 ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ.
- ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದ ಸರಳ ವಿವಾಹ ಪ್ರೋತ್ಸಾಹಕ್ಕೆ ಎನ್ಜಿಒ ಮೂಲಕ ನಡೆಯುವ ಸಾಮೂಹಿಕ ವಿವಾಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ.
- ಬೆಂಗಳೂರು ಹಜ್ ಭವನ ಹೆಚ್ಚುವರಿ ಕಟ್ಟಡ ನಿರ್ಮಾಣ.
- ರಾಜ್ಯದಲ್ಲಿ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ನೀಡಲು 2 ಕೋಟಿ ರೂ ಅನುದಾನ.
- ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ. ಮಹಾಬೋಧಿ ಅಧ್ಯಯನ ಕೇಂದ್ರದ 100 ವರ್ಷದ ಹಳೆಯ ಗ್ರಂಥಾಲಯ ಡಿಜಿಟಲೀಕರಣಕ್ಕೆ 1 ಕೋಟಿ ರೂ.
- ಜೈನ, ಬೌದ್ಧ ಮತ್ತು ಸಿಖ್ ಸಮುದಾಯ ಅಭವೃದ್ಧಿಗೆ 100 ಕೋಟಿ ರೂ ಅನುದಾನ.
- ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ.
- ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿ, ಮಸೀದಿ ಪೇಷ್ ಇಮಾಮ್ಗಳಿಗೆ ನೀಡುವ ಮಾಸಿಕ ಗೌರವಧನ 6,000 ರೂ ಹೆಚ್ಚಳ, ಸಿಖ್ ಸಹಾಯಕ ಗ್ರಂಥಿ ಹಾಗೂ ಮೋಝಿನ್ಗಳಿಗೆ ಮಾಸಿಕ ಗೌರವಧನ 5000 ರೂ ಹೆಚ್ಚಳ.
- ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆ.
- ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿ ಚಟುವಟಿಕೆ ಮತ್ತು ಸಾಮಾಜಿಕ ಚಟುವಟಿಕೆ ಹಮ್ಮಿಕೊಳ್ಳಲು ತಾಲೂಕು ಮಟ್ಟದಲ್ಲಿ 50 ಲಕ್ಷ ರೂ, ಜಿಲ್ಲಾ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಕೋಟಿ ವೆಚ್ಚದಲ್ಲಿ ಭವನ ನಿರ್ಮಾಣ.
- ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶದಲ್ಲಿ ಐಟಿಐ ಕೋರ್ಸ್ ಪ್ರಾರಂಭ.
ಇದನ್ನೂ ಓದಿ