Puttur Temple: ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕಕ್ಕೆ ಸಕಲ ತಯಾರಿ, ಶಿವನಿಗೆ ಪ್ರಾರ್ಥಿಸಿ ಅಕ್ಟೋಬರ್ 18 ರಂದು ಸಮರ್ಪಣೆ! | Mahalingeshwara Temple | ದಕ್ಷಿಣ ಕನ್ನಡ

Puttur Temple: ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕಕ್ಕೆ ಸಕಲ ತಯಾರಿ, ಶಿವನಿಗೆ ಪ್ರಾರ್ಥಿಸಿ ಅಕ್ಟೋಬರ್ 18 ರಂದು ಸಮರ್ಪಣೆ! | Mahalingeshwara Temple | ದಕ್ಷಿಣ ಕನ್ನಡ

Last Updated:

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೊದಲ ಬಾರಿ ಶಿವಲಿಂಗಕ್ಕೆ ಎಳ್ಳೆಣ್ಣೆ ಅಭಿಷೇಕ ಆರಂಭ, ಈಶ್ವರ ಭಟ್ ಪಂಜಿಗುಡ್ಡೆ ನೇತೃತ್ವದಲ್ಲಿ ಭಕ್ತರಿಗೆ ಸಮರ್ಪಣೆ ಅವಕಾಶ ನೀಡಲಾಗಿದೆ.

+

ಇಲ್ಲಿ

ಇಲ್ಲಿ ವಿಡಿಯೋ ನೋಡಿ

ದಕ್ಷಿಣ ಕನ್ನಡ: ಇತಿಹಾಸ ಪ್ರಸಿದ್ಧ ಮಹತೋಭಾರ ಮಹಲಿಂಗೇಶ್ವರ (Mahalingeshwara) ದೇವಸ್ಥಾನದಲ್ಲಿ (Temple) ಇತಿಹಾಸದಲ್ಲೇ ಮೊದಲ ಬಾರಿಗೆ ದೇವರ ವಿಗ್ರಹಕ್ಕೆ ಎಳ್ಳೆಣ್ಣೆ ಅಭಿಷೇಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈ ಹಿಂದೆ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಈ ನಿರ್ಧಾರಕ್ಕೆ ಬರಲಾಗಿದೆ. ಮೋದಕ ಹೋಮ, ತುಪ್ಪ ದೀಪ, ಶುದ್ದ ಎಣ್ಣೆ (Pure Oil), ಗಾಯತ್ರಿ ಪೂಜೆ ಸಹಿತ ದೇವರಿಗೆ ಪ್ರೀತ್ಯರ್ಥವಾಗಿ ಭಕ್ತರ ಬೇಡಿಕೆಯಂತೆ ಹಲವು ಸೇವೆಗಳನ್ನು ನೆರವೇರಿಸಲು ಕಾರಣಕರ್ತರಾದ ಇತಿಹಾಸ ಪ್ರಸಿದ್ಧ ಪುತ್ತೂರು (Puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೈವಜ್ಞರು ಉಲ್ಲೆಘಿಸಿದ ರೀತಿಯಲ್ಲೇ ದೀಪಾವಳಿಯ ಅಕ್ಟೋಬರ್ 18 ರಂದು ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಸಮರ್ಪಣೆ ಮಾಡಲಿದ್ದಾರೆ. ಭಕ್ತರಿಗೆ ಎಳ್ಳೆಣ್ಣೆ ಸಮರ್ಪಣೆ ಅವಕಾಶಕ್ಕಾಗಿ ಆಗಸ್ಟ್ 6 ರಂದು ಚಾಲನೆ ನೀಡಲಾಗಿದೆ.

ಶಿವ ದೇವರಿಗೆ ಎಳ್ಳೆಣ್ಣೆ ಸಮರ್ಪಣೆ

ದೇವಳದ ಹಿಂದಿನ ಆಡಳಿತ ಸಮಿತಿ ನಡೆಸಿದ ಅಷ್ಟಮಂಗಲ ಪ್ರಶ್ನಾಚಿಂತನೆಯ ವಿಚಾರಗಳನ್ನು ಪುಸ್ತಕರೂಪಕ್ಕೆ ತಂದಿದ್ದರು. ಅದರಲ್ಲಿ ದೈವಜ್ಞರು ಉಲ್ಲೇಖಿಸಿರುವಂತೆ ಶಿವ ದೇವರಿಗೆ ಎಳ್ಳೆಣ್ಣೆ ಸಮರ್ಪಣೆಯನ್ನು ಇದೀಗ ಈಗಿನ ಆಡಳಿತ ಸಮಿತಿ ಕಾರ್ಯರೂಪಕ್ಕೆ ತಂದಿದ್ದಾರೆ.

ಅ.6ರಂದು ಬೆಳಗ್ಗೆ ಶ್ರೀ ದೇವರ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡಿ ತುಪ್ಪದ ದೀಪ ಬೆಳಗಿಸಿ ಎಳ್ಳೆಣ್ಣೆ ಸಮರ್ಪಣೆಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಚಾಲನೆ ನೀಡಿದರು.

ಪ್ರಥಮವಾಗಿ ಎಳ್ಳೆಣ್ಣೆ ಖರೀದಿ

ಈಶ್ವರ ಭಟ್ ಪಂಜಿಗುಡ್ಡೆಯವರು ಪ್ರಥಮವಾಗಿ ಎಳ್ಳೆಣ್ಣೆ ಖರೀದಿಸಿದರು. ಇವರ ಜೊತೆ ಸಮಿತಿ ಸದಸ್ಯರು, ಭಕ್ತರು ಜೊತೆಯಲ್ಲಿ ಎಳ್ಳೆಣ್ಣೆ ಖರೀದಿಸಿ ಎಳ್ಳೆಣ್ಣೆ ಶೇಖರಣಾ ಡಬ್ಬಿಗೆ ಎರೆಯಲಾಯಿತು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ಹಿರಿಯರಾದ ಕಿಟ್ಟಣ್ಣ ಗೌಡ, ಶಿವರಾಮ ಆಳ್ವ, ಭಾಸ್ಕರ್ ಬಾರ್ಯ, ಗೋವರ್ಧನ್ ಕಾವೇರಿಕಟ್ಟೆ, ಗೋವಿಂದ ಭಟ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕರೂ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು ಆಗಿರುವ ವೇ ಮೂ ವಸಂತ ಕೆದಿಲಾಯ ಅವರು ವಿಶೇಷ ಪ್ರಾರ್ಥನೆ ಮಾಡಿದರು.