Dakshina Kannada: ಇಸ್ಲಾಂ, ಕ್ರಿಶ್ಚಿಯನ್​​​ನಂತೆ ಹಿಂದೂ ಮಕ್ಕಳಿಗೂ ಧಾರ್ಮಿಕ ಶಿಕ್ಷಣ; ಪುತ್ತೂರಿನಲ್ಲಿ ಮೊದಲ ಪ್ರಯೋಗ | Sringeri Math has organized program to provide religious education to Hindu children in every village

Dakshina Kannada: ಇಸ್ಲಾಂ, ಕ್ರಿಶ್ಚಿಯನ್​​​ನಂತೆ ಹಿಂದೂ ಮಕ್ಕಳಿಗೂ ಧಾರ್ಮಿಕ ಶಿಕ್ಷಣ; ಪುತ್ತೂರಿನಲ್ಲಿ ಮೊದಲ ಪ್ರಯೋಗ | Sringeri Math has organized program to provide religious education to Hindu children in every village

Last Updated:

ಯೋಜನೆಯ ಪ್ರಕಾರ ಪ್ರತೀ ಗ್ರಾಮದಲ್ಲಿ ಅಗತ್ಯ ಶಿಕ್ಷಕರನ್ನು ನೇಮಿಸಿ, ವಾರದಲ್ಲಿ ಕನಿಷ್ಠ ಒಂದು ತರಗತಿ ನೀಡಲು ಚಿಂತನೆ ನಡೆಸಲಾಗಿದೆ.

X

ಇಲ್ಲಿ ವಿಡಿಯೋ ನೋಡಿ

ದಕ್ಷಿಣ ಕನ್ನಡ: ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದ ಮಕ್ಕಳಿಗೆ ಯಾವ ರೀತಿಯಲ್ಲಿ ಧಾರ್ಮಿಕ ಶಿಕ್ಷಣವನ್ನು (Religious Education) ಎಳವೆಯಲ್ಲೇ ನೀಡಲಾಗುತ್ತದೋ, ಅಂತಹುದೇ ಧಾರ್ಮಿಕ ಶಿಕ್ಷಣವನ್ನು ಹಿಂದೂ ಧರ್ಮದ (Hindu) ಮಕ್ಕಳಿಗೂ  (Children) ನೀಡುವ ವಿಶೇಷ ಯೋಜನೆಯೊಂದಕ್ಕೆ ಚಾಲನೆ ದೊರೆತಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ಯೋಜನೆಯನ್ನು ಆರಂಭಿಸಲಾಗಿದ್ದು, ಪುತ್ತೂರು (Puttur) ತಾಲೂಕಿನಲ್ಲಿ ಈ ಯೋಜನೆಯು ಪ್ರಾರಂಭಗೊಳ್ಳಲಿದೆ. ಎಲ್ಲಾ ಹಿಂದೂ ಮಕ್ಕಳಿಗೆ ಧರ್ಮದ ಶಿಕ್ಷಣ ನೀಡುವ ಯೋಜನೆ ಇದಾಗಿದೆ.

ಪುತ್ತೂರು ತಾಲೂಕಿನಲ್ಲಿ ಶಾಲಾ ಮಕ್ಕಳಿಗೆ 3 ಹಂತದಲ್ಲಿ ನೀಡಲು ಉದ್ದೇಶಿಸಿರುವ ಹಿಂದೂ ಧಾರ್ಮಿಕ ಶಿಕ್ಷಣ ಯೋಜನೆಯಲ್ಲಿ ಮಹತ್ವದ ಮೈಲುಗಲ್ಲು ಸ್ಥಾಪಿಸಲಾಗಿದೆ. ಪ್ರತೀ ಗ್ರಾಮದಲ್ಲಿ ರಚನೆಯಾಗಲಿರುವ ಗ್ರಾಮ ಸಮಿತಿಗೆ ಕೆದಂಬಾಡಿ ಗ್ರಾಮದಲ್ಲಿ ಚಾಲನೆ ನೀಡಲಾಗಿದ್ದು, ತಾಲೂಕಿನ ಪ್ರಥಮ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಗ್ರಾಮ ಸಮಿತಿಗಳ ರಚನೆ ನಡೆಯಲಿದೆ.

ಶೃಂಗೇರಿ ಮಠದಿಂದಲೇ ಪಠ್ಯ ಪುಸ್ತಕ ಮತ್ತು ಶಿಕ್ಷಕ ತರಬೇತಿ

ಶ್ರೀ ಆದಿ ಶಂಕರಾಚಾರ್ಯರಿಂ ಸ್ಥಾಪಿತವಾದ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಮತ್ತು ಶ್ರೀ ವಿಧುಶೇಖರ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಡೆಯುವ ಹಿಂದೂ ಧಾರ್ಮಿಕ ಶಿಕ್ಷಣಕ್ಕೆ ಶೃಂಗೇರಿ ಮಠದಿಂದಲೇ ಪಠ್ಯ ಪುಸ್ತಕ ಮತ್ತು ಶಿಕ್ಷಕ ತರಬೇತಿ ಕಾರ್ಯ ನಡೆಯಲಿದ್ದು, ಇದನ್ನು ಅನುಷ್ಠಾನಗೊಳಿಸಲು ಪುತ್ತೂರು ತಾಲೂಕು ಮಟ್ಟದ ಮೇಲುಸ್ತುವಾರಿ ಸಮಿತಿ ರಚನೆಯಾಗುತ್ತಿದೆ. ಇದೇ ವೇಳೆ ಪ್ರತೀ ಗ್ರಾಮ ಮಟ್ಟದಲ್ಲೂ ಸಮಿತಿ ರಚನೆಗೆ ಚಾಲನೆ ನೀಡಲಾಗಿದೆ.

ಹಿಂದೂ ಧರ್ಮದಲ್ಲಿ ಉದಾತ್ತ ಸಂಸ್ಕೃತಿ, ಆಚಾರ ವಿಚಾರ, ನಂಬಿಕೆ, ಪದ್ಧತಿ, ಧಾರ್ಮಿಕ ಅಂಶಗಳಿದ್ದರೂ, ಇವುಗಳನ್ನು ನಮ್ಮ ಮಕ್ಕಳಿಗೆ ವ್ಯವಸ್ಥಿತವಾಗಿ ಕಲಿಸುವ ಮಾಧ್ಯಮವಿಲ್ಲದ ಕಾರಣ ಹಿಂದೂ ಮಕ್ಕಳು ಆಧುನಿಕತೆಯ ಸೆಳೆತಕ್ಕೆ ಸಿಕ್ಕಿ ಧರ್ಮದಿಂದ ದೂರವಾಗುತ್ತಿದ್ದಾರೆ. ಇದರ ಪ್ರಯೋಜನ ಇತರರು ಪಡೆಯುವಂತಾಗಿದೆ. ಇದನ್ನು ತಪ್ಪಿಸಿ ಹಿಂದೂ ಮಕ್ಕಳನ್ನು ಸುಸಂಸ್ಕೃತರನಗ್ನಾಗಿ ಮಾಡುವುದೇ ಧಾರ್ಮಿಕ ಶಿಕ್ಷಣದ ಗುರಿಯಾಗಿದೆ.

3 ಹಂತದಲ್ಲಿ ಧಾರ್ಮಿಕ ಶಿಕ್ಷಣ

ಯೋಜನೆಯ ಪ್ರಕಾರ ಪ್ರತೀ ಗ್ರಾಮದಲ್ಲಿ ಅಗತ್ಯ ಶಿಕ್ಷಕರನ್ನು ನೇಮಿಸಿ, ವಾರದಲ್ಲಿ ಕನಿಷ್ಠ ಒಂದು ತರಗತಿ ನೀಡಲು ಚಿಂತನೆ ನಡೆಸಲಾಗಿದೆ. ಗ್ರಾಮಸ್ಥರ ದೇಣಿಗೆಯಿಂದಲೇ ಶಿಕ್ಷಕರಿಗೆ ಗೌರವಧನ ನೀಡುವುದು, ಭವಿಷ್ಯದ ಹಿಂದೂ ಸಮಾಜವನ್ನು ಸುಸಂಸ್ಕೃತಗೊಳಿಸುವ ಪ್ರಯೋಗ ಇದಾಗಿದೆ.

ಇದನ್ನೂ ಓದಿ: Mysuru: ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿ ಒಂದು ವರ್ಷ; ಮೈಸೂರಿನಲ್ಲಿ ರಂಗೋಲಿಯಲ್ಲಿ ಅರಳಿದ ಆಂಜನೇಯ ಕಲಾಕೃತಿ

ಈ ವರ್ಷದ ಯುಗಾದಿಯಿಂದಲೇ ತಾಲೂಕಿನ ಎಲ್ಲ ಗ್ರಾಮಗಳ ಶ್ರದ್ಧಾ ಕೇಂದ್ರವನ್ನು ಕೇಂದ್ರವಾಗಿಟ್ಟುಕೊಂಡು ಏಕ ಕಾಲದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಆರಂಭಿಸಲಾಗುತ್ತದೆ. 1 ರಿಂದ 4 ನೇ ತರಗತಿ, 5 ರಿಂದ 8 ನೇ ತರಗತಿ ಮತ್ತು 9 ರಿಂದ ದ್ವಿತೀಯ ಪಿಯುಸಿ- ಹೀಗೆ 3 ಹಂತದಲ್ಲಿ ಧಾರ್ಮಿಕ ಶಿಕ್ಷಣ ನಡೆಯಲಿದ್ದು, ಇದಕ್ಕಾಗಿ 3 ಹಂತದ ಪಠ್ಯ ಪುಸ್ತಕ ಶೃಂಗೇರಿ ಮಠದಿಂದ ಸಿಗಲಿದೆ. ಗ್ರಾಮ ಮಟ್ಟದಲ್ಲಿ ನೇಮಕಗೊಳ್ಳುವ ಶಿಕ್ಷಕರಿಗೆ ಶೃಂಗೇರಿ ಮಠದಿಂದಲೇ ತರಬೇತಿ ನೀಡಲಾಗುತ್ತದೆ. ತಾಲೂಕಿನ ಗ್ರಾಮಗಳಲ್ಲಿ ಗ್ರಾಮ ಸಮಿತಿ ರಚನೆಯಾಗುತ್ತಿದ್ದು, ಜನವರಿ 26 ರಂದು ತಾಲೂಕು ಮೇಲುಸ್ತುವಾರಿ ಸಮಿತಿ ಸಭೆ ಪುತ್ತೂರಿನಲ್ಲಿ ನಡೆಯಲಿದೆ.