Air India Crash: ಅಹಮದಾಬಾದ್​ ವಿಮಾನ ದುರಂತ! ವಿರಾಟ್, ರೋಹಿತ್ ಸೇರಿ ದಿಗ್ಗಜ ಕ್ರೀಡಾಪಟುಗಳಿಂದ ಸಂತಾಪ | Cricket Fraternity in Shock Virat Kohli Rohit Sharma Pay Tribute to Air India Crash Victims

Air India Crash: ಅಹಮದಾಬಾದ್​ ವಿಮಾನ ದುರಂತ! ವಿರಾಟ್, ರೋಹಿತ್ ಸೇರಿ ದಿಗ್ಗಜ ಕ್ರೀಡಾಪಟುಗಳಿಂದ ಸಂತಾಪ | Cricket Fraternity in Shock Virat Kohli Rohit Sharma Pay Tribute to Air India Crash Victims

Last Updated:

ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಹಲವಾರು ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಭಾರತ ತಂಡದ ಲೆಜೆಂಡರಿ ಕ್ರಿಕೆಟರ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಕೂಡ ಈ ದುರಂತ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಕೊಹ್ಲಿ-ರೋಹಿತ್ ಶರ್ಮಾಕೊಹ್ಲಿ-ರೋಹಿತ್ ಶರ್ಮಾ
ಕೊಹ್ಲಿ-ರೋಹಿತ್ ಶರ್ಮಾ

ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿದ್ದ ಎಲ್ಲಾ 200ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಜಗತ್ತನ್ನೇ ತಲ್ಲಣಗೊಳಿಸಿದೆ. ಗುಜರಾತ್ ಮಾಜಿ ಸಿಎಂ ಸೇರಿ 150ಕ್ಕೂ ಹೆಚ್ಚು ಭಾರತೀಯರು ಅಸು ನೀಗಿದ್ದಾರೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಹಲವಾರು ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಭಾರತ ತಂಡದ ಲೆಜೆಂಡರಿ ಕ್ರಿಕೆಟರ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಕೂಡ ಈ ದುರಂತ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದ ಸುದ್ದಿ ಕೇಳಿ ಆಘಾತಕ್ಕೊಳಗಾಗಿರುವುದಾಗಿ ತಿಳಿಸಿದ್ದು, ಎಲ್ಲಾ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮತ್ತೊಂದೆಡೆ, ಅನುಷ್ಕಾ ಶರ್ಮಾ ಕೂಡ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ.

” ಇಂದು ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದಿಂದ ಆಘಾತಕ್ಕೊಳಗಾಗಿದ್ದೇನೆ. ಈ ದುಃಖದ ಸಂದರ್ಭದಲ್ಲಿ ಹಾನಿಗೊಳಗಾದ ಎಲ್ಲರ ಕುಟುಂಬಗಳಿಗೆ ಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದಾರೆ. ಮತ್ತೊಂದೆಡೆ ಅನುಷ್ಕಾ ಶರ್ಮಾ ” ಇಂದು ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ಸುದ್ದಿ ಕೇಳಿ ತುಂಬಾ ದುಃಖವಾಗಿದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಎಲ್ಲರೊಂದಿಗೂ ಇವೆ” ಎಂದು ಬರೆದಿದ್ದಾರೆ.

ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ಪೋಸ್ಟ್

ಭಾರತ ತಂಡದ ಲಜೆಂಡರಿ ಆಲ್​ರೌಂಡರ್” ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಸುದ್ದಿ ಕೇಳಿ ಹೃದಯ ಹೊಡೆದಿದೆ. ಪ್ರಯಾಣಿಕರು, ಸಿಬ್ಬಂದಿಗಳ ಕುಟುಂಬಸ್ಥರೊಂದಿಗೆ ನನ್ನ ಪ್ರಾರ್ಥನೆಗಳಿರಲಿವೆ. ಈ ಕಷ್ಟದ ಸಮಯದಲ್ಲಿ ಅವರಿಗೆ ದುಃಖವನ್ನ ತಡೆಯುವ ಶಕ್ತಿ ಪಡೆಯಲಿ ” ಎಂದು ಯುವರಾಜ್ ಸಿಂಗ್ ತಮ್ಮ ಮಾಜಿ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.

” ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ತಿಳಿದು ನನಗೆ ಆಘಾತ ಮತ್ತು ತೀವ್ರ ದುಃಖವಾಗಿದೆ. ಊಹಿಸಲಾಗದ ನೋವನ್ನು ಅನುಭವಿಸುತ್ತಿರುವ ಎಲ್ಲಾ ಪ್ರಯಾಣಿಕರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಇರಲಿದೆ” ಎಂದು ಹರ್ಭಜನ್ ಬರೆದಿದ್ದಾರೆ.

ಭಾರತೀಯ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ಅಹಮದಾಬಾದ್‌ ಘಟನೆ ಕೇಳಿ ತುಂಬಾ ದುಃಖಕರ ಮತ್ತು ಆಘಾತವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಪ್ರಾರ್ಥನೆಗಳು” ಎಂದು ಬರೆದಿದ್ದಾರೆ.

ರೋಹಿತ್ ಶರ್ಮಾ

ಅಫ್ಘಾನಿಸ್ತಾನದ ರಶೀದ್ ಖಾನ್ ಕೂಡ ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. “ಇಂದು ಅಹಮದಾಬಾದ್‌ನಲ್ಲಿ ನಡೆದ ದುರಂತ ಅಪಘಾತದ ಬಗ್ಗೆ ಕೇಳಿ ತುಂಬಾ ದುಃಖವಾಗಿದೆ. ನನ್ನ ಸಂತಾಪ ಮತ್ತು ಪ್ರಾರ್ಥನೆಗಳಿರಲಿವೆ” ಎಂದು ಬರೆದಿದ್ದಾರೆ.

ಬ್ಯಾಡ್ಮಿಂಟನ್ ಸ್ಟಾರ್ ಪಿವಿ ಸಿಂಧು, ಮಾಜಿ ಕ್ರಿಕೆಟರ್ ಸುರೇಶ್ ರೈನಾ, ಸೂರ್ಯಕುಮಾರ್ ಯಾದವ್ ಸೇರಿ ಹಲವಾರ ಕ್ರೀಡಾಲೋಕದ ಗಣ್ಯರು, ವಿವಿಧ ಕ್ಷೇತ್ರದ ದಿಗ್ಗಜರು ಸಂತಾಪ ಸೂಚಿಸಿದ್ದಾರೆ.