Last Updated:
ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಕೂಡ ಬೆಂಗಳೂರಿನ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು (ಅ.17): ಇತ್ತೀಚಿಗೆ ರಾಜ್ಯ ರಾಜಧಾನಿ ಬೆಂಗಳೂರು ಸಮಸ್ಯೆಗಳಿಂದಲೇ ರಾಷ್ಟ್ರಮಟ್ಟದಲ್ಲಿ ಸುದ್ದಿ ಆಗ್ತಿದೆ. ಮಹಾನಗರಿಯ ಗುಂಡಿ ಸಮಸ್ಯೆಗಳ (Pothole Problem) ಬಗ್ಗೆ ಕೆಲ ದಿನಗಳ ಹಿಂದಷ್ಟೇ ಐಟಿ ದಿಗ್ಗಜರು ಅಸಮಾಧಾನ ಹೊರ ಹಾಕಿದ್ರು. ಇದೀಗ ಮಾಜಿ ಕ್ರಿಕೆಟರ್ ಕೂಡ ಬೆಂಗಳೂರಿನ ಟ್ರಾಫಿಕ್ ಜಾಮ್ (Bengaluru Traffic) ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.
ಕೆಐಎಎಲ್ ಏರ್ಪೋಟ್ ರಸ್ತೆಯಲ್ಲಿ ಬೆಳಗಿನ ಜಾವ ಭಾರೀ ವಾಹನಗಳ ಸಂಚಾರ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದ್ರಿಂದ ಜನ ಸಾಮಾನ್ಯರಿಗೆ ಕಿರಿಕಿರಿಯಾಗ್ತಿದೆ. ಈ ಬಗ್ಗೆ ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಎಕ್ಸ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಅನುಮತಿ ಕೊಟ್ಟವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರ್, ಡಿಸಿಎಂ ಡಿಕೆ ಶಿವಕುಮಾರ್ ಸರ್, ವಿಮಾನ ನಿಲ್ದಾಣ ಮಾರ್ಗದಲ್ಲಿ ದಿನದ ವೇಳೆಯಲ್ಲೂ ಸರಕು ಮತ್ತು ನಿರ್ಮಾಣ ವಾಹನಗಳನ್ನು ಹೇಗೆ ಅನುಮತಿಸಲಾಗುತ್ತಿದೆ? ಇವುಗಳಿಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮಾತ್ರ ಚಾಲನೆಗೆ ಅನುಮತಿ ಇರಬೇಕು ಅಲ್ಲವೇ? ಈಗ ಈ ವಾಹನಗಳು ಫಾಸ್ಟ್ ಲೇನ್ ಗಳನ್ನು ಬಂದ್ ಮಾಡುತ್ತಿವೆ.
ಇದರಿಂದ ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ ಬರುವ ಪ್ರಯಾಣಿಕರಿಗೆ ಭಾರೀ ಟ್ರಾಫಿಕ್ ಜಾಮ್ ಆಗುತ್ತಿದೆ. ದಯವಿಟ್ಟು ಈ ಕುರಿತು ಕ್ರಮ ಕೈಗೊಳ್ಳಿ ಸರ್, ಸಾಮಾನ್ಯ ಜನರು ಪ್ರಯಾಣಿಸಲು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ ಎಂದು ಮಾಜಿ ಕ್ರಿಕೆಟರ್ ಸುಶೀಲ್ ಜೋಶಿ ಟ್ವೀಟ್ನಲ್ಲಿ ಬರೆದಿದ್ದಾರೆ.
CM & DCM of Karnataka @siddaramaiah Sir @DKShivakumar Sir
ವಿಮಾನ ನಿಲ್ದಾಣ ಮಾರ್ಗದಲ್ಲಿ ದಿನದ ವೇಳೆಯಲ್ಲೂ ಸರಕು ಮತ್ತು ನಿರ್ಮಾಣ ವಾಹನಗಳನ್ನು ಹೇಗೆ ಅನುಮತಿಸಲಾಗುತ್ತಿದೆ?
ಇವುಗಳಿಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮಾತ್ರ ಚಾಲನೆಗೆ ಅನುಮತಿ ಇರಬೇಕು ಅಲ್ಲವೇ?
ಈಗ ಈ ವಾಹನಗಳು ಫಾಸ್ಟ್ ಲೇನ್ಗಳನ್ನು ಬಂದ್ ಮಾಡುತ್ತಿವೆ,…
— Sunil Joshi | 🇮🇳 ಸುನಿಲ್ ಜೋಶಿ (@SunilJoshi_Spin) October 16, 2025
ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಅವರು ತಮ್ಮ ಟ್ವೀಟ್ ಅನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸಿಎಂ ಹಾಗೂ ಡಿಸಿಎಂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
October 17, 2025 8:35 AM IST
Bengaluru: ಉದ್ಯಮಿಗಳಾಯ್ತು ಈಗ ಕ್ರಿಕೆಟರ್ ಸರದಿ, ಬೆಂಗಳೂರಿನ ಬಗ್ಗೆ ಸುನೀಲ್ ಜೋಶಿ ಟ್ವೀಟ್, ಸಿಎಂ, ಡಿಸಿಎಂರನ್ನ ಟ್ಯಾಗ್ ಮಾಡಿ ಹೇಳಿದ್ದೇನು?