Chinnaswamy Stadium: ಕಾಲ್ತುಳಿತದ ಎಫೆಕ್ಟ್, BCCI ಖಡಕ್ ನಿರ್ಧಾರ; ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್​! | Stampede effect BCCI takes a bold decision Matches scheduled to be held at Chinnaswamy Stadium in Bengaluru shifted

Chinnaswamy Stadium: ಕಾಲ್ತುಳಿತದ ಎಫೆಕ್ಟ್, BCCI ಖಡಕ್ ನಿರ್ಧಾರ; ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್​! | Stampede effect BCCI takes a bold decision Matches scheduled to be held at Chinnaswamy Stadium in Bengaluru shifted

Last Updated:

ಚಿನ್ನಸ್ವಾಮಿಯಲ್ಲಿ ನಡೆದ ಕಾಲ್ತುಳಿತದ ಎಫೆಕ್ಟ್​​ ಮುಂಬವರು  ಪಂದ್ಯಾವಳಿ ಮೇಲೂ ಆಗಿದೆ. ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕ್ರಿಕೆಟ್​​ ಪಂದ್ಯಗಳನ್ನು ಬಿಸಿಸಿಐ ಸ್ಥಳಾಂತರ ಮಾಡಿದೆ ಎನ್ನಲಾಗ್ತಿದೆ.

News18News18
News18

ಬೆಂಗಳೂರು (ಜೂ 10): ಆರ್​ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತರಾದ್ರು. ಬೆಂಗಳೂರು ಕಾಲ್ತುಳಿತ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಅನೇಕ ಕ್ರೀಡಾಪಟುಗಳು ಈ ಬಗ್ಗೆ ಪ್ರತಿಕ್ರಿಯಿಸಿದ್ರು. ಜೀವಕ್ಕಿಂತ ಯಾವುದು ದೊಡ್ಡದಲ್ಲ. ವಿಜಯೋತ್ಸವದ ಅವಶ್ಯಕತೆ ಇರಲಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ರು. ಇದರ ಬೆನ್ನಲ್ಲೇ ಕ್ರೀಡಾಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಶಿಫ್ಟ್ ಮಾಡಲಾಗಿದೆ ಎಂದು ವರದಿ ಆಗಿದೆ. 

ಬೆಂಗಳೂರಿನಿಂದ ಪಂದ್ಯಗಳು ಬೇರೆಡೆ ಸ್ಥಳಾಂತರ!

ಚಿನ್ನಸ್ವಾಮಿಯಲ್ಲಿ ನಡೆದ ಕಾಲ್ತುಳಿತದ ಎಫೆಕ್ಟ್​​ ಮುಂಬವರು  ಪಂದ್ಯಾವಳಿ ಮೇಲೂ ಆಗಿದೆ. ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕ್ರಿಕೆಟ್​​ ಪಂದ್ಯಗಳನ್ನು ಬಿಸಿಸಿಐ ಸ್ಥಳಾಂತರ ಮಾಡಿದೆ ಎನ್ನುವ ಸುದ್ದಿ ಹೊರಬಿದ್ದಿದೆ. ಕಾಲ್ತುಳಿತದ ಘಟನೆ ಬಳಿಕ ಬಿಸಿಸಿಐ ಪಂದ್ಯ ಸ್ಥಳಾಂತರಕ್ಕೆ ನಿರ್ಧಾರ ಮಾಡಿದೆ ಎನ್ನಲಾಗ್ತಿದೆ.

ಬೆಂಗಳೂರಿನಿಂದ ರಾಜ್ ಕೋಟ್​ಗೆ ಪಂದ್ಯಗಳು ಶಿಫ್ಟ್​

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಸೌತ್​ ಆಫ್ರಿಕಾ ನಡುವಿನ ಪಂದ್ಯಗಳನ್ನು ನಡೆಸಲು ಈ ಮೊದಲು ಬಿಸಿಸಿಐ ನಿರ್ಧಾರ ಮಾಡಿತ್ತು. ಇದೀಗ ಆರ್​ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆ ಬೆಂಗಳೂರಿನಿಂದ ರಾಜ್ ಕೋಟ್ ಗೆ ಪಂದ್ಯಗಳನ್ನ ಸ್ಥಳಾಂತರ ಮಾಡಿದ್ದಾರೆ ಎನ್ನಲಾಗ್ತಿದೆ.

ಭಾರತ ಹಾಗೂ ಸೌತ್​ ಆಫ್ರಿಕಾ ಮ್ಯಾಚ್​

ಭಾರತ ಹಾಗೂ ಸೌತ್​ ಆಫ್ರಿಕಾ ನಡುವೆ ನವೆಂಬರ್ 13 ರಿಂದ 19ರ ವರೆಗೆ ಮೂರು ಏಕದಿನ ಪಂದ್ಯಗಳು ನಡೆಯಬೇಕಿತ್ತು. ಆದರೆ ಈಗ ಬೆಂಗಳೂರಿನಿಂದ ರಾಜ್​ಕೋಟ್​ಗೆ ಪಂದ್ಯಗಳು ಸ್ಥಳಾಂತರಗೊಂಡಿದೆ. ಆದ್ರೆ ಪಂದ್ಯ ಸ್ಥಳಾಂತರ ಬಗ್ಗೆ ಬಿಸಿಸಿಐ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ ಎನ್ನಲಾಗ್ತಿದೆ.

ಇತ್ತ ಸ್ಟೇಡಿಯಂ ಸ್ಥಳಾಂತಕ್ಕೆ ಸರ್ಕಾರದ ಚಿಂತನೆ

ಕಾಲ್ತುಳಿದ ಘಟನೆ ಬಳಿಕ ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವರು ಕ್ರೀಡಾಂಗಣ ಸ್ಥಳಾಂತರಕ್ಕೆ ಪರಿಶೀಲಿಸಲಾಗುತ್ತಿದೆ. ಯಾವುದೇ ಸರ್ಕಾರದ ಅಡಿಯಲ್ಲಿ ಇಂತಹ ಅಹಿತಕರ ಘಟನೆ ನಡೆಯಬಾರದು. ವೈಯಕ್ತಿಕವಾಗಿ, ಈ ಘಟನೆ ನನಗೆ ಮತ್ತು ನನ್ನ ಸರ್ಕಾರಕ್ಕೆ ತೀವ್ರ ನೋವುಂಟು ಮಾಡಿದೆ ಎಂದು ಹೇಳಿದ್ರು.

ನಗರದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಕರ್ಬನ್ ಪಾರ್ಕ್ ರಸ್ತೆ ಕೂಡ ಒಂದಾಗಿದೆ.  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಮುಖ ಕ್ರಿಕೆಟ್ ಪಂದ್ಯಾವಳಿಗಳು ನಡೆದಾಗಲೆಲ್ಲಾ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ. ಚಿನ್ನಸ್ವಾಮಿ ಸ್ಟೇಡಿಯಲ್ಲಿ ಸುಮಾರು 35,000 ಪ್ರೇಕ್ಷಕರಿಗೆ ಸ್ಥಳಾವಕಾಶ ಕಲ್ಪಿಸಬಹುದು, ಆದರೆ ಜೂನ್ 4 ರಂದು, ಆರ್​ಸಿಬಿ ವಿಜಯೋತ್ಸವಕ್ಕೆ ಕ್ರೀಡಾಂಗಣದ ಸುತ್ತಲೂ 3 ಲಕ್ಷಕ್ಕೂ ಹೆಚ್ಚು ಜನರು ಜಮಾಯಿಸಿದ್ದರು ಎಂದು ವರದಿಯಾಗಿದೆ.

ಕನ್ನಡ ಸುದ್ದಿ/ ನ್ಯೂಸ್/ಕ್ರೀಡೆ/

Chinnaswamy Stadium: ಕಾಲ್ತುಳಿತದ ಎಫೆಕ್ಟ್, BCCI ಖಡಕ್ ನಿರ್ಧಾರ; ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್​!