Delhi CM: ನೂತನ ದೆಹಲಿ ಸಿಎಂಗೆ ಪ್ರಧಾನಿ ಶುಭ ಹಾರೈಕೆ, ನರೇಂದ್ರ ಮೋದಿಯ ಅದೊಂದು ಮಾತಿಗೆ ದೆಹಲಿ ಜನತೆ ಖುಷಿ ಆಗಿದ್ದೇಕೆ?

 

Delhi CM: ನೂತನ ದೆಹಲಿ ಸಿಎಂಗೆ ಪ್ರಧಾನಿ ಶುಭ

 ಹಾರೈಕೆ, ನರೇಂದ್ರ ಮೋದಿಯ ಅದೊಂದು
 ಮಾತಿಗೆ ದೆಹಲಿ ಜನತೆ ಖುಷಿ ಆಗಿದ್ದೇಕೆ?


ಸಿಎಂ ರೇಖಾ ಗುಪ್ತಾ ಅವರ ಸುದೀರ್ಘ ರಾಜಕೀಯ ಪ್ರಯಾಣವನ್ನು ಶ್ಲಾಘಿಸಿದ ನರೇಂದ್ರ ಮೋದಿ ಅವರು, ತಳಮಟ್ಟದಿಂದ ಪ್ರಾರಂಭಿಸಿದ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆ ಆಡಳಿತ ಮತ್ತು ಶಾಸಕಿಯಾಗಿ ಸಕ್ರಿಯರಾಗಿದ್ದಾರೆ ಎಂದು ಮೋದಿ ಹೇಳಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಅವರನ್ನು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಅಭಿನಂದಿಸಿದ್ದಾರೆ.

ಸಿಎಂ ರೇಖಾ ಗುಪ್ತಾ ಅವರ ಸುದೀರ್ಘ ರಾಜಕೀಯ ಪ್ರಯಾಣವನ್ನು ಶ್ಲಾಘಿಸಿದ ನರೇಂದ್ರ ಮೋದಿ ಅವರು, ತಳಮಟ್ಟದಿಂದ ಪ್ರಾರಂಭಿಸಿದ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆ ಆಡಳಿತ ಮತ್ತು ಶಾಸಕಿಯಾಗಿ ಸಕ್ರಿಯರಾಗಿದ್ದಾರೆ ಎಂದು ಮೋದಿ ಹೇಳಿದರು.



Rekha Gupta: ಅಧಿಕಾರ ಸ್ವೀಕಾರದ ಬೆನ್ನಲ್ಲೇ ಯುಮನಾ ನದಿಗೆ ದೆಹಲಿ ಸಿಎಂ ಪೂಜೆ, ‘ಸ್ವಚ್ಛ ಯಮುನೆ’ಗಾಗಿ ರೇಖಾ ಗುಪ್ತಾ ಶಪಥ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿಯ ರೇಖಾ ಗುಪ್ತಾ ಅವರು ತಮ್ಮ ಸಚಿವ ಸಂಪುಟದ ಸದಸ್ಯರೊಂದಿಗೆ ಇಂದು ಯಮುನಾ ನದಿಗೆ ಆರತಿ ಮಾಡುವ ಮೂಲಕ ತಮ್ಮ ಅಧಿಕಾರವಾಧಿಯನ್ನು ಪ್ರಾರಂಭಿಸಿದ್ದಾರೆ.

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿಯ ರೇಖಾ ಗುಪ್ತಾ ಅವರು ತಮ್ಮ ಸಚಿವ ಸಂಪುಟದ ಸದಸ್ಯರೊಂದಿಗೆ ಇಂದು ಯಮುನಾ ನದಿಗೆ ಆರತಿ ಮಾಡುವ ಮೂಲಕ ತಮ್ಮ ಅಧಿಕಾರಾವಧಿಯನ್ನು ಪ್ರಾರಂಭಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ಯಮುನಾ ನದಿ ತೀರದ ವಾಸುದೇವ್ ಘಾಟ್‌ನಲ್ಲಿ ಯಮುನಾ ನದಿಗೆ ರೇಖಾ ಗುಪ್ತಾ ಅವರು ದೀಪಗಳನ್ನು ಬೆಳಗುವ ಮೂಲಕ ಸ್ತೋತ್ರಗಳ ಪಠಣದೊಂದಿಗೆ ಆರತಿ ನೆರವೇರಿಸಿದರು. ಇನ್ನು ಸಿಎಂ ರೇಖಾ ಗುಪ್ತಾ ಅವರಿಗೆ ಉಪ ಮುಖ್ಯಮಂತ್ರಿ ಪರ್ವೇಶ್ ವರ್ಮಾ, ಬಿಜೆಪಿ ರಾಜ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ ಹಾಗೂ ಸಂಪುಟ ಸಚಿವರಾದ ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದ್ರ ಇಂದ್ರಜಿತ್, ಕಪಿಲ್ ಮಿಶ್ರಾ, ಪಂಕಜ್ ಕುಮಾರ್ ಸಿಂಗ್ ಸಾಥ್ ನೀಡಿದರು.

ಇನ್ನು ದೆಹಲಿಯ ಚುನಾವಣೆಯಲ್ಲಿ ಯಮುನಾ ನದಿಯ ಸ್ವಚ್ಛತೆಯು ಪ್ರಮುಖ ವಿಷಯವಾಗಿತ್ತು. ಆದರಂತೆ ಆಪ್ ಹಾಗೂ ಬಿಜೆಪಿ ನಡುವೆ ಈ ಕುರಿತು ಭಾರೀ ವಾಗ್ವಾದವು ನಡೆದಿತ್ತು. ಏತನ್ಮಧ್ಯೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಯಮುನಾ ನದಿಯನ್ನು ಸ್ವಚ್ಛ ಮಾಡಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಸಹ ಆದೇಶ ನೀಡಿದ್ದರು.

Leave a Reply

Your email address will not be published. Required fields are marked *