Last Updated:
ಕರಾವಳಿ ಕಾವಲು ಪಡೆ ಅಧಿಕಾರಿಗಳು ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್ ಗಳನ್ನು ತಪಾಸಣೆ ನಡೆಸಿ ಮೀನುಗಾರರ ದಾಖಲೆ ಪರಿಶೀಲಿಸಿದ್ದಾರೆ.
ದಕ್ಷಿಣ ಕನ್ನಡ: ಪಾಕಿಸ್ತಾನದ ಉಗ್ರರ ನೆಲೆಗಳ(Terrorists Bases) ಮೇಲೆ ಭಾರತ ದಾಳಿ(Attack) ನಡೆಸಿದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಹೈ ಅಲರ್ಟ್(High Alert) ಘೋಷಿಸಲಾಗಿದೆ. ಮಂಗಳೂರಿನ ಕಡಲ ತೀರದಲ್ಲಿ ಕರಾವಳಿ ಕಾವಲು ಪಡೆಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬೀ ಸಮುದ್ರದಲ್ಲಿ(Arabian Sea) ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಮಂಗಳೂರಿನ ಬಂದರು(Mangaluru Port) ಕಡಲ ತೀರದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಕರಾವಳಿ ಕಾವಲು ಪಡೆ ಅಧಿಕಾರಿಗಳು ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್ ಗಳನ್ನು ತಪಾಸಣೆ ನಡೆಸಿ ಮೀನುಗಾರರ ದಾಖಲೆ ಪರಿಶೀಲಿಸಿದ್ದಾರೆ. ಸದ್ಯ ಅನುಮಾನಾಸ್ಪದ ಬೋಟ್ಗಳ ಮೇಲೆ ನಿಗಾ ಇಟ್ಟಿರುವ ಪೊಲೀಸರು ತಪಾಸಣೆ ಮುಂದುವರೆಸಿದ್ದಾರೆ.
ಇನ್ನು ಕೋಸ್ಟ್ ಗಾರ್ಡ್ ನೌಕೆಗಳೂ ಆಳ ಸಮುದ್ರದಲ್ಲಿ ಪಹರೆಯನ್ನು ಮುಂದುವರಿಸಿವೆ. ಯಾವುದೇ ತರಹದ ದಾಳಿಯನ್ನು ಎದುರಿಸಲು ಸರ್ವ ಸನ್ನದ್ಧರಾಗಿರುವಂತೆ ಸೂಚನೆ ನೀಡಲಾಗಿದೆ. ಕೋಸ್ಡ್ ಗಾರ್ಡ್ ನೌಕೆ ವರಾಹ ಸೇರಿದಂತೆ ಹಲವು ನೌಕೆಗಳು ಗಸ್ತು ಹೆಚ್ಚಳ ಮಾಡಿವೆ. ಆಳ ಸಮುದ್ರಕ್ಕೆ ತೆರಳುವ ಮೀನುಗಾರಿಕಾ ಬೋಟಗಳ ಮೇಲೆ ನಿಗಾ ಇಡಲಾಗಿದೆ.
ಈಗಾಗಲೇ ಬೋಟ್ ಮಾಲಕರಿಗೆ ತಮ್ಮ ಬೋಟ್ ಕಾರ್ಮಿಕರ ಐಡಿ ಕಾರ್ಡ್ ಪಡೆಯುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಆಳ ಸಮುದ್ರಕ್ಕೆ ತೆರಳುವ ಕಾರ್ಮಿಕರ ಬಗ್ಗೆ ಗಮನಹರಿಸಲು ಕರಾವಳಿ ಕಾವಲು ಪಡೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
Dakshina Kannada,Karnataka
May 08, 2025 11:59 AM IST