Last Updated:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು, ಭಾರತವು ಪಾಕಿಸ್ತಾನದೊಂದಿಗೆ ಎಲ್ಲಾ ಸಂಬಂಧಗಳನ್ನು ಕಡಿದಿದೆ. ಶಾಹಿದ್ ಅಫ್ರಿದಿ ಹೇಳಿಕೆಗೆ ಶಿಖರ್ ಧವನ್ ತಿರುಗೇಟು ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ (Pahalgam Attack) ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಮೃತಪಟ್ಟಿದ್ದಾರೆ. ಈ ದುಷ್ಕೃತ್ಯ ಹಿನ್ನಲೆಯಲ್ಲಿ ಭಾರತವು ಪಾಕಿಸ್ತಾನ್ (India vs Pakistan) ನಡುವಣ ಎಲ್ಲಾ ರೀತಿಯ ಸಂಬಂಧಗಳನ್ನು ಕಡಿದುಕೊಂಡಿದೆ. ಇದರ ನಡುವೆ ಉಭಯ ದೇಶಗಳ ನಡುವಣ ಕ್ರಿಕೆಟ್ ಪಂದ್ಯಕ್ಕೂ ಬ್ರೇಕ್ ಬೀಳಬೇಕೆಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ. ಈ ನಡುವೆ ಪಾಕಿಸ್ತಾನದವರು ದಾಳಿ ಮಾಡಿದ್ದಾರೆ ಎಂಬುದಕ್ಕೆ ಏನು ಪುರಾವೆ ಇದೆ ಎಂದು ಪಾಕ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahid Afridhi) ಕೇಳಿದ್ದಾರೆ. ಈ ಹೇಳಿಕೆಗೆ ಟೀಂ ಇಂಡಿಯಾ ಮಾಜಿ ಆಟಗಾರ ಶಿಖರ್ ಧವನ್ (Shikhar Dhawan) ಖಡಕ್ ತಿರುಗೇಟು ನೀಡಿದ್ದಾರೆ.
ಇನ್ನೂ ಎಷ್ಟು ಬಾರಿ ಸೋಲುತ್ತೀರಾ?
ಹೌದು, ಅಫ್ರಿಧಿ ಅವರನ್ನು ಗುರಿಯಾಗಿಸಿಕೊಂಡು ಎಕ್ಸ್ ಪೋಸ್ಟ್ ಮಾಡಿರುವ ಶಿಖರ್ ಧವನ್, ನೀವು ನಮ್ಮ ವಿರುದ್ಧ ಕಾರ್ಗಿಲ್ನಲ್ಲಿ ಸೋತಿದ್ಧೀರ. ಮಾತ್ರವಲ್ಲ, ನೀವು ಈಗಾಗಲೇ ತುಂಬಾ ಬಾರಿ ಸೋತಿದ್ದೀರಿ ಇನ್ನೂ ಎಷ್ಟು ಬಾರಿ ಸೋಲುತ್ತೀರಾ? ಇನ್ನೂ ಎಷ್ಟು ಬಾರಿ ಬೀಳುವಿರಿ. ನಿಷ್ಪ್ರಯೋಜಕ ಹೇಳಿಕೆಗಳನ್ನು ನೀಡುವ ಬದಲು ನಿಮ್ಮ ದೇಶದ ಪ್ರಗತಿಗೆ ನಿಮ್ಮ ಬುದ್ಧಿಯನ್ನು ಬಳಸುವುದು ಉತ್ತಮ. ಅಫ್ರಿಧಿ ನಮ್ಮ ಭಾರತೀಯ ಸೇನೆಯ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ಭಾರತ ಮಾತೆಗೆ ಜಯವಾಗಲಿ ಎಂದು ತಿರುಗೇಟು ನೀಡಿದರು.
ಅಫ್ರಿಧಿ ಹೇಳಿದ್ದೇನು?
ಚಿಟ್ ಚಾಟ್ ಒಂದರಲ್ಲಿ ಮಾತನಾಡಿದ ಶಾಹಿದ್ ಅಫ್ರಿದಿ ಅವರಿಗೆ ಭಾರತದ ಮೇಲಿನ ಉಗ್ರರ ದಾಳಿ ಹಾಗೂ ಭಾರತ ಮತ್ತು ಪಾಕಿಸ್ತಾನ್ ನಡುವಣ ಕ್ರಿಕೆಟ್ ಬಗ್ಗೆ ಪ್ರಶ್ನಿಸಲಾಗಿತ್ತು. ಪಾಕಿಸ್ತಾನದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಅಫ್ರಿದಿ, ನನಗೆ ಕ್ರಿಕೆಟ್ ಮತ್ತು ಕ್ರೀಡಾ ರಾಜತಾಂತ್ರಿಕತೆಯಲ್ಲಿ ಆಳವಾದ ನಂಬಿಕೆ ಇದೆ. ಇದರಲ್ಲಿ ಯಾವುದೇ ರಾಜಕೀಯ ಇರಬಾರದು.
ನಾವು ನೆರೆಯ ರಾಷ್ಟ್ರಗಳಾಗಿದ್ದರೆ, ನಾವು ಪರಸ್ಪರ ಕಾಳಜಿ ವಹಿಸಬೇಕು. ಆದರೆ ಈ ಘಟನೆ ಇದೀಗ ನಡೆದಿದೆ. ಇದಾಗ್ಯೂ ನೀವು ನೇರವಾಗಿ ಪಾಕಿಸ್ತಾನದ ಹೆಸರನ್ನು ಹೆಸರಿಸಿದ್ದೀರಿ. ಹೀಗೆ ಪಾಕಿಸ್ತಾನ್ ಈ ಕೃತ್ಯ ಎಸೆಗಿದ್ದಾರೆ ಎನ್ನಲು ಕನಿಷ್ಠ ಪುರಾವೆಗಳೊಂದಿಗೆ ಬನ್ನಿ. ಅದನ್ನು ಜಗತ್ತಿಗೆ ಮುಂದಿಡಿ. ಪುರಾವೆಗಳಿಲ್ಲದೆ ಪಾಕಿಸ್ತಾನವನ್ನು ದೂರಬೇಡಿ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.
ಇದನ್ನೂ ಓದಿ: Vaibhav Suryavamshi: 6,4,6,4,4,6 ಒಂದೇ ಓವರ್ನಲ್ಲಿ 30 ರನ್! ವೈಭವ್ ಸಿಡಿಸಲಬ್ಬರದ ಆಟಕ್ಕೆ ಸಲಾಮ್ ಹೊಡೆದ ಕ್ರಿಕೆಟ್ ಜಗತ್ತು!
ಆದಾಗ್ಯೂ, ಘಟನೆಯ ಬಗ್ಗೆ ಅಫ್ರಿದಿ ವಿಷಾದ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದಕರನ್ನು ಯಾವುದೇ ಧರ್ಮದವರು ಬೆಂಬಲಿಸುವುದಿಲ್ಲ. ಪಾಕಿಸ್ತಾನದಲ್ಲೂ ಇಂತಹ ಕೃತ್ಯಗಳು ನಡೆಯುತ್ತಿದೆ. ಈ ಘಟನೆಯ ಹೊರತಾಗಿಯೂ, ಎರಡೂ ದೇಶಗಳ ನಡುವಿನ ಸಂಬಂಧಗಳು ಸುಧಾರಿಸಬೇಕು ಎಂದು ಶಾಹಿದ್ ಅಫ್ರಿದಿ ಅಭಿಪ್ರಾಯಪಟ್ಟಿದ್ದಾರೆ.
ಭಾರತದ ಕಠಿಣ ಕ್ರಮ
ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಭಾರತವು ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಭಾರತ ಕೂಡ ಪಾಕಿಸ್ತಾನದೊಂದಿಗಿನ ಗಡಿಯನ್ನು ಮುಚ್ಚಿದೆ. ಅಲ್ಲದೆ, ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ನಾಗರಿಕರನ್ನು ವಾಪಸ್ ಕಳುಹಿಸಲಾಗಿದೆ. ಪಾಕಿಸ್ತಾನಿ ರಾಜತಾಂತ್ರಿಕರ ವೀಸಾಗಳನ್ನು ಸಹ ರದ್ದುಗೊಳಿಸಲಾಗಿದೆ.
April 28, 2025 11:15 PM IST