ಪಾಕಿಸ್ತಾನದ ಜೊತೆಗೆ ದ್ವಿಪಕ್ಷೀಯ ಸರಣಿಯ ಚರ್ಚೆಯೂ ಇಲ್ಲ
ಬಿಸಿಸಿಐ ಪರವಾಗಿ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ತಮ್ಮ ಪ್ರತಿಕ್ರಿಯಿಸಿದ್ದು, “ನಮ್ಮ ಬೆಂಬಲ ಸಂತ್ರಸ್ತ ಕುಟುಂಬಗಳಿಗೆ ಸಲ್ಲುತ್ತದೆ” ಎಂದು ರಾಜೀವ್ ಶುಕ್ಲಾ ಹೇಳಿದರು. ನಾವು ಭಯೋತ್ಪಾದಕ ಕೃತ್ಯವನ್ನು ಬಲವಾಗಿ ಖಂಡಿಸುತ್ತೇವೆ. ಸರ್ಕಾರದ ನಿರ್ಧಾರಕ್ಕೆ ನಾವು ಯಾವಾಗಲೂ ಬದ್ಧರಾಗಿರುತ್ತೇವೆ. ನಾವು ಇನ್ನು ಮುಂದೆ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿಗಳನ್ನು ಆಡುವುದಿಲ್ಲ. ಸರ್ಕಾರ ಹೇಳಿದಂತೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡುವ ಬಗ್ಗೆ ಯಾವುದೇ ಚರ್ಚೆಯೂ ನಡೆಯುವುದಿಲ್ಲ. ಆದರೆ, ಐಸಿಸಿ ಈವೆಂಟ್ಗಳಲ್ಲಿ, ಭಾರತವು ನಿಯಮಗಳ ಪ್ರಕಾರ ಪಾಕಿಸ್ತಾನದ ವಿರುದ್ಧ ಪಂದ್ಯಗಳನ್ನು ಆಡುತ್ತದೆ. “ಐಸಿಸಿ ಕೂಡ ಪ್ರಸ್ತುತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ” ಎಂದು ಅವರು ಸ್ಪೋರ್ಟ್ಸ್ತಕ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಲಖನೌ ಮಾಲೀಕನಿಗೆ ತವರಿನ ಅಭಿಮಾನಿಗಳ ಮುಂದೆ ಕೂಲ್ ಆಗಿಯೇ ತಿರುಗೇಟು ಕೊಟ್ಟ ರಾಹುಲ್!
ಅತ್ಯಂತ ದುಃಖಕರ ಸಂಗತಿ
ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರತಿಕ್ರಿಯಿಸಿ, “ಪಹಲ್ಗಾಮ್ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯಿಂದ ಅಮಾಯಕರ ಜೀವಹಾನಿ ಅತ್ಯಂತ ದುಃಖಕರವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು. ಬಿಸಿಸಿಐ ಪರವಾಗಿ ನಾವು ಭಯೋತ್ಪಾದಕ ಕೃತ್ಯವನ್ನು ಬಲವಾಗಿ ಖಂಡಿಸುತ್ತೇವೆ. ಸಂತ್ರಸ್ತ ಕುಟುಂಬಗಳಿಗೆ ನಮ್ಮ ಸಂತಾಪ ಸೂಚಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ಅವರೆಲ್ಲರೂ ಧೈರ್ಯ ಕಳೆದುಕೊಳ್ಳದಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಅವರ ಜೀವನದಲ್ಲಿ ನಡೆದ ದುರಂತವನ್ನು ವರ್ಣಿಸಲು ಪದಗಳೇ ಸಾಲದು. ನಾವೆಲ್ಲರೂ ಅವರ ಬೆಂಬಲಕ್ಕೆ ನಿಲ್ಲುವ ಸಮಯ ಇದು” ಎಂದು ಅವರು ಹೇಳಿದರು.
ಸಂತ್ರಸ್ತರಿಗೆ ಶ್ರದ್ಧಾಂಜಲಿ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಐಪಿಎಲ್-2025 ರ ಭಾಗವಾಗಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಸಂದರ್ಭದಲ್ಲಿ ಬಿಸಿಸಿಐ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಗೌರವ ಸಲ್ಲಿಸಲಾಯಿತು. ಎಲ್ಲಾ ಆಟಗಾರರು ಒಂದು ನಿಮಿಷ ಮೌನ ಆಚರಿಸಿದರು. ಅದೇ ರೀತಿ, ಚಿಯರ್ಲೀಡರ್ಗಳ ಪ್ರದರ್ಶನವನ್ನೂ ನಿಷೇಧಿಸಲಾಗಿತ್ತು. ಯಾವುದೇ ಪಟಾಕಿಗಳನ್ನು ಸಹ ಸಿಡಿಸಿರಲಿಲ್ಲ.
ಇದನ್ನೂ ಓದಿ: ಲಖನೌ ಮಾಲೀಕನಿಗೆ ತವರಿನ ಅಭಿಮಾನಿಗಳ ಮುಂದೆ ಕೂಲ್ ಆಗಿಯೇ ತಿರುಗೇಟು ಕೊಟ್ಟ ರಾಹುಲ್!
2008ರಲ್ಲಿ ಕೊನೆಯ ಪ್ರವಾಸ
ಭಾರತ ತಂಡ ಕೊನೆಯ ಬಾರಿಗೆ ಪಾಕಿಸ್ತಾನ ಪ್ರವಾಸ ಮಾಡಿದ್ದು 2008 ರಲ್ಲಿ. ಅದೇ ರೀತಿ, ಪಾಕಿಸ್ತಾನ ತಂಡವು 2012-13 ರಲ್ಲಿ ಸೀಮಿತ ಓವರ್ಗಳ ಸರಣಿಯನ್ನು ಆಡಲು ಭಾರತಕ್ಕೆ ಬಂದಿತು. ಅದಾದ ನಂತರ, ಪಾಕಿಸ್ತಾನ ತಂಡವು ಐಸಿಸಿ ಏಕದಿನ ವಿಶ್ವಕಪ್-2023 ಆಡಲು ಭಾರತಕ್ಕೆ ಭೇಟಿ ನೀಡಿತು, ಆದರೆ ಭಾರತೀಯ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 ಆಡಲು ಅಲ್ಲಿಗೆ ಹೋಗಲಿಲ್ಲ. ಭದ್ರತಾ ಕಾರಣಗಳಿಂದ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡರೆ, ರೋಹಿತ್ ತಂಡವು ಐಸಿಸಿಯ ಹಸ್ತಕ್ಷೇಪದೊಂದಿಗೆ ತಟಸ್ಥ ಸ್ಥಳವಾದ ದುಬೈನಲ್ಲಿ ತಮ್ಮ ಪಂದ್ಯಗಳನ್ನು ಆಡಿತು. ಈ ಮೆಗಾ ಟೂರ್ನಮೆಂಟ್ನಲ್ಲಿ ಭಾರತ ಜಯಶಾಲಿಯಾಗಿ ಹೊರಹೊಮ್ಮಿದರೆ, ಆತಿಥೇಯ ಪಾಕಿಸ್ತಾನ ತಂಡ ಒಂದೇ ಒಂದು ಗೆಲುವು ಸಾಧಿಸದೆ ನಿರ್ಗಮಿಸಿತು.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಪ್ರದೇಶದಲ್ಲಿ ಭಯೋತ್ಪಾದಕರು ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ಮಿನಿ ಸ್ವಿಟ್ಜರ್ಲೆಂಡ್ ಎಂದು ಕರೆಯಲ್ಪಡುವ ಈ ಸ್ಥಳವನ್ನು ನೋಡಲು ಬಂದಿದ್ದ ಪ್ರವಾಸಿಗರ ಮೇಲೆ ಅವರು ಮನಬಂದಂತೆ ಗುಂಡು ಹಾರಿಸಿ 26 ಜನರನ್ನು ಕೊಂದಿದ್ದಾರೆ. ಈ ದಾಳಿಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ.
April 24, 2025 5:22 PM IST