Ramadan Celebration: ದೇಶದೆಲ್ಲೆಡೆ ರಂಜಾನ್ ಸಂಭ್ರಮ; ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ | Ramadan Celebration across the country Mass prayers in mosques Dakshina Kannada

Ramadan Celebration: ದೇಶದೆಲ್ಲೆಡೆ ರಂಜಾನ್ ಸಂಭ್ರಮ; ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ | Ramadan Celebration across the country Mass prayers in mosques Dakshina Kannada

Last Updated:

ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದ್ದಾರೆ. ಹಾಗೇ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.

X

ಇಲ್ಲಿ ವಿಡಿಯೋ ನೋಡಿ

ಮಂಗಳೂರು: ದೇಶದಾದ್ಯಂತ ಮುಸ್ಲಿಂ ಬಾಂಧವರು (Muslim Community) ಸಂಭ್ರಮದಿಂದ ರಂಜಾನ್ ಹಬ್ಬ (Ramadan Celebration) ಆಚರಣೆ ಮಾಡ್ತಿದ್ದಾರೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಈದ್ಗಾ ಮೈದಾನದಲ್ಲಿ (Idgah Maidan) ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ (UT Khader) ಪಾಲ್ಗೊಂಡು ಹಬ್ಬದ ಶುಭಾಶಯ ಕೋರಿದ್ದಾರೆ. ಕರಾವಳಿಯಲ್ಲಿ (Coastal Karnataka) ರಂಝಾನ್ ಹಬ್ಬದ ಸಂಭ್ರಮ ಜೋರಾಗಿದೆ.

ಪವಿತ್ರ ರಂಜಾನ್ 29 ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಮುಂಜಾನೆಯಿಂದ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನಡೆದಿದೆ.

ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದ್ದಾರೆ. ಹಾಗೇ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಬಹುತೇಕ ಎಲ್ಲಾ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಝ್, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡು ಬಂದಿದೆ.ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಉಪವಾಸಿಗರು ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: Bengaluru: RO ಪ್ಲಾಂಟ್ ನೀರು ಕುಡಿಯುತ್ತೀರಾ? ಹಾಗಾದೆ ಹುಷಾರ್! ವರದಿಯಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ

ಮಂಗಳೂರು ನಗರದ ಬಾವುಟಗುಡ್ಡದ ಈದ್ಗಾ ಜುಮಾ ಮಸ್ಜಿದ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಖುತ್ಬಾ ಪಾರಾಯಣಗೈದರು.ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶಾಸಕ‌ ಐವನ್ ಡಿಸೋಜ, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಈದ್ಗಾ ಮಸೀದಿಗೆ ಭೇಟಿ ನೀಡಿ ಶುಭ ಹಾರೈಸಿದರು.