RCB vs CSK: ಸಿಎಸ್​​​ಕೆ ಪಂದ್ಯಕ್ಕೂ ಮುನ್ನ ಆರ್​​ಸಿಬಿಗೆ ಸಿಕ್ತು ಗುಡ್​​​ನ್ಯೂಸ್; ಸ್ವಿಂಗ್ ಕಿಂಗ್ ಕಣಕ್ಕೆ ಇಳಿಯೋದು ಕನ್ಫರ್ಮ್ | RCB vs CSK 2025 RCB gets good news before CSK match Swing King Bhuvneshwar Kumar Injury

RCB vs CSK: ಸಿಎಸ್​​​ಕೆ ಪಂದ್ಯಕ್ಕೂ ಮುನ್ನ ಆರ್​​ಸಿಬಿಗೆ ಸಿಕ್ತು ಗುಡ್​​​ನ್ಯೂಸ್; ಸ್ವಿಂಗ್ ಕಿಂಗ್ ಕಣಕ್ಕೆ ಇಳಿಯೋದು ಕನ್ಫರ್ಮ್ | RCB vs CSK 2025 RCB gets good news before CSK match Swing King Bhuvneshwar Kumar Injury

ಐಪಿಎಲ್ 2025 ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನೊಂದಿಗೆ ಆರಂಭಿಸಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿತ್ತು. ಆದರೆ, ತಂಡದ ಸ್ಟಾರ್ ವೇಗಿ ಭುವನೇಶ್ವರ್ ಕುಮಾರ್ ಈ ಪಂದ್ಯದಲ್ಲಿ ಆಡಲಿಲ್ಲ. ಭುವನೇಶ್ವರ್ ಅವರಿಗೆ ಏನಾಯಿತು ಎಂದು ಅಭಿಮಾನಿಗಳು ಆಶ್ಚರ್ಯ ಪಡುತ್ತಿದ್ದರು. ಅವರು ಪೂರ್ಣ ಫಿಟ್ನೆಸ್ ಸಾಧಿಸದ ಕಾರಣ ಆಡಲಿಲ್ಲ ಎಂದು ನಂತರ ತಿಳಿದುಬಂದಿತ್ತು.

ಐಪಿಎಲ್ ಟೂರ್ನಿ ಮುಂದಿನ ಪಂದ್ಯದಲ್ಲಿ ಆರ್‌ಸಿಬಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಎರಡೂ ತಂಡಗಳು ಈಗಾಗಲೇ ತಮ್ಮ ಮೊದಲ ಪಂದ್ಯವನ್ನು ಗೆದ್ದಿವೆ. ಅವರು ಗೆಲುವಿನ ಓಟವನ್ನು ಮುಂದುವರಿಸಲು ಇತ್ತಂಡಗಳು ಗೇಮ್ ಪ್ಲ್ಯಾನ್ ಮಾಡ್ತಿವೆ.

ಇದನ್ನೂ ಓದಿ: RCB vs CSK: ಸಿಎಸ್​ಕೆ ತ್ರಿವಳಿ ಸ್ಪಿನ್ನರ್​​ಗೆ ಟಕ್ಕರ್ ಕೊಡಲು ಕೊಹ್ಲಿ ಮಾಸ್ಟರ್ ಪ್ಲಾನ್! ಹೇಗಿದೆ ನೋಡಿ ತಯಾರಿ

ಇದರ ನಡುವೆಯೇ ಸಿಎಸ್​​ಕೆ ಪಂದ್ಯಕ್ಕೂ ಮುನ್ನ ಬೆಂಗಳೂರು ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ಗಾಯದ ಕಾರಣದಿಂದ ಕೆಕೆಆರ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಭುವನೇಶ್ವರ್ ಕುಮಾರ್ ಮತ್ತೆ ಫಿಟ್ನೆಸ್ ಸಾಧಿಸಿದ್ದಾರೆ. ಇದರೊಂದಿಗೆ ಅವರು ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಆರ್‌ಸಿಬಿ ಮೆಂಟರ್ ದಿನೇಶ್ ಕಾರ್ತಿಕ್ ಬಹಿರಂಗಪಡಿಸಿದ್ದಾರೆ.

ಗುರುವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ವಿರುದ್ಧ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸಿಎಸ್‌ಕೆ ವಿರುದ್ಧದ ಪಂದ್ಯವನ್ನು ಗೆದ್ದರೆ ಆರ್‌ಸಿಬಿ ಅಗ್ರ ಸ್ಥಾನದಲ್ಲೇ ಮುಂದುವರಿಯಲಿದೆ. ಆರ್‌ಸಿಬಿ ಪ್ರಸ್ತುತ +2.137 ರನ್ ರೇಟ್ ಹೊಂದಿದೆ. ಭುವನೇಶ್ವರ್ ಕುಮಾರ್ ಅವರ ಆಗಮನದೊಂದಿಗೆ ತಂಡದ ಬೌಲಿಂಗ್ ಇನ್ನಷ್ಟು ಬಲಿಷ್ಠವಾಗಲಿದೆ.

ಐಪಿಎಲ್ 2025 ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ:

ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ರಸಿಕ್ ದಾರ್, ಸುಯಾಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಟಿಮ್ ಡೇವಿಡ್, ಸ್ವಪ್ನಿಲ್ ಸಿಂಗ್, ನುವಾನ್ ತುಷಾರ, ಮನೋಜ್ ಭಾಂಡಗೆ, ರೊಮಾರಿಯೊ ಶೆಫರ್ಡ್, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್, ಮೋಹಿತ್ ರಾಠಿ, ಲುಂಗಿ ಎನ್ಗಿಡಿ. ಒಟ್ಟಾರೆಯಾಗಿ ಭುವನೇಶ್ವರ್ ಕುಮಾರ್ ತಂಡಕ್ಕೆ ಲಭ್ಯ ಆಗಿರುವುದು ಆರ್‌ಸಿಬಿಗೆ ಪ್ಲಸ್ ಪಾಯಿಂಟ್ ಆಗಿದೆ.