ನೈರುತ್ಯ ರೈಲ್ವೆ ಇಲಾಖೆಯು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕರು ಸಹಕರಿಸಬೇಕೆಂದು ಕೋರಿದೆ. ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ರದ್ದಾಗುತ್ತಿವೆ. ಗೊಮ್ಮಟೇಶ್ವರ ಎಕ್ಸ್ಪ್ರೆಸ್, ಕಾರವಾರ ಎಕ್ಸ್ಪ್ರೆಸ್, ಮಂಗಳೂರು ಸೆಂಟ್ರಲ್ ವಾರದ ವಿಶೇಷ ಎಕ್ಸ್ಪ್ರೆಸ್ ಮುಂದಿನ 5 ತಿಂಗಳು ರದ್ದಾಗಲಿವೆ. ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಸಂಚಾರ ನಡೆಸುವ 12 ರೈಲುಗಳ ಪೈಕಿ 6 ರೈಲುಗಳು ಸಂಪೂರ್ಣ ರದ್ದಾಗುತ್ತಿವೆ.
ಮಂಗಳೂರು – ಬೆಂಗಳೂರು ಮಾರ್ಗದಲ್ಲಿ ರದ್ದಾಗುವ ರೈಲುಗಳ ಮಾಹಿತಿ ಹೀಗಿದೆ:
ಮೇ 31 ರಿಂದ ನವೆಂಬರ್ 1 ರವರೆಗೆ ಶನಿವಾರಗಳಂದು ಸಂಚರಿಸುವ ಯಶವಂತಪುರ – ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು.
ಜೂನ್ 1 ರಿಂದ ನವೆಂಬರ್ 2 ರವರೆಗೆ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ರದ್ದು.
ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು.
ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ರದ್ದು.
ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ರದ್ದು.
ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲು ರದ್ದು.
ಅರ್ಧಕ್ಕರ್ಧ ರೈಲುಗಳು ರದ್ದು:
ಗೊಮ್ಮಟೇಶ್ವರ ಎಕ್ಸ್ಪ್ರೆಸ್, ಕಾರವಾರ ಎಕ್ಸ್ಪ್ರೆಸ್, ಮಂಗಳೂರು ಸೆಂಟ್ರಲ್ ವಾರದ ವಿಶೇಷ ಎಕ್ಸ್ಪ್ರೆಸ್ ಮುಂದಿನ 5 ತಿಂಗಳು ರದ್ದಾಗಲಿವೆ. ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಸಂಚಾರ ನಡೆಸುವ 12 ರೈಲುಗಳ ಪೈಕಿ 6 ರೈಲುಗಳು ಸಂಪೂರ್ಣ ರದ್ದಾಗುತ್ತಿವೆ. ಈ ಮೂಲಕ ಪ್ರಯಾಣಿಕರು ಬದಲಿ ಮಾರ್ಗ ಆಯ್ದುಕೊಳ್ಳಬೇಕಾದ ಅನಿವಾರ್ಯತೆ ಇದೆ.
Dakshina Kannada,Karnataka
May 26, 2025 11:08 AM IST